ಸಾಕಿದ್ದರು ನಮ್ಮ, ತೋರದೆ ಕರುಣೆ ಕೊಂಚ
ಕೋಮಲವಾದ ಕರಗಳಲ್ಲಿ ಸೇರಿದಾಗಲೂ ನಾವು
ತಿಳಿದಿದ್ದೆವೂ ಇನ್ನು ಮುಂದೂ ನಮಗೆ ಬೇವು
ಸಹೃದಯದ ಪೋರಿಗೆ ತಿಳಿಯಿತಾದರೂ ಹೇಗೆ
ಈ ಪ್ರಣಯ ಹಕ್ಕಿಗಳ ಪ್ರತಿದಿನದ ಬೇಗೆ?
ಉಡುಗೊರೆಯಾಗಿ ಕೊಡುತ್ತಾ ನಮ್ಮನ್ನು,
ಬಿಡುಗಡೆ ಮಾಡಿಸಿದಳು... ಪಂಜರದಿಂದ ಪ್ರಪಂಚಕ್ಕೆ!
.........ಇದು ಅಂತರಂಗದ ಅನುಭವ
Posted By ಅಂತರ್ವಾಣಿ at 11:10 pm 1 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಇತರೆ, ಕವನಗಳು, ವಿಶೇಷ ಕವನಗಳು
Posted By ಅಂತರ್ವಾಣಿ at 11:52 pm 5 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು
ನನಗೆ ಈಗ ಅನ್ನಿಸ್ತಿದೆ
ದುಡ್ಡಿನ ಗಿಡ ಇರಬೇಕಿತ್ತು!
ನನಗೆ ಬಂದ ಸಮಸ್ಯೆಗೆ
ದುಡ್ಡೇ ಉತ್ತರ ಕೊಡಬೇಕಿತ್ತು
ಚಿಕ್ಕ ವಯಸ್ನಲ್ ಅಮ್ಮ ಹೇಳಿದ್ನ
ಹಾಸ್ಯ ಅಂತ ತಿಳ್ಕೊಂಡಿದ್ದೆ
ದುಡ್ಡೂ ಕೂಡ ಹಾಳೆಯಂತೆ! ಬೆಲ್ಲೆಯಂತೆ!
ಹೇಗೆ ಬೆಳೆಸೋದ್ ಅಂದ್ಕೊಂಡಿದ್ದೆ
ವಸುಂಧರೆ ತಾಯಿ ನೀನು
ಬೀಜ ಹಾಕಿದ್ರೆ ಮರ ಮಾಡ್ತಿ
ನಾಣ್ಯವೊಂದ ಬಿತ್ತುತ್ತೀನಿ
ದುಡ್ಡಿನ ಗಿಡ ಮಾಡ್ತೀಯಾ?
ಜೀವಕ್ ಬೇಕಾದ್ ಅನ್ನ, ನೀರು
ಎಲ್ಲಾ ನೀನೆ ಕೊಡ್ತೀಯಾ
ಜೀವನ ಸಾಗಿಸೋಕ್ ಬೇಕೀ ದುಡ್ಡು
ಇನ್ನೂ ಯಾಕೆ ಕೊಟ್ಟಿಲ್ಲ?
ನಾಣ್ಯಕ್ ಜೀವ ಕೊಟ್ಟು ನೋಡು
ಬಿತ್ತಿ ಪ್ರಯತ್ನ ಮಾಡ್ತೀನಿ!
ದುಡ್ಡಿನ ಗಿಡ ಬಂದ್ರೆ ಸಾಕು
ಬಡವರ ಸಮಸ್ಯೆ ಪರಿಹರಿಸ್ತೀನಿ.
ನನಗೆ ಈಗ ಅನ್ನಿಸ್ತಿದೆ
ದುಡ್ಡಿನ ಗಿಡ ಇರಬೇಕಿತ್ತು!
ನನಗೆ ಬಂದ ಸಮಸ್ಯೆಗೆ
ದುಡ್ಡೇ ಉತ್ತರ ಕೊಡಬೇಕಿತ್ತು.
Posted By ಅಂತರ್ವಾಣಿ at 8:58 pm 9 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು, ವಿಶೇಷ ಕವನಗಳು
ಜ್ಞಾನದ ಶಾಯಿ ಲೇಖನಿಯೊಳಿರಲು
ಹೊಮ್ಮುವುದು ಲೇಖನವು
ಜ್ಞಾನದ ಶಾಯಿ ಬರಿದಾದ ಮೇಲೆ
ಹೊಮ್ಮದು ಒಂದಕ್ಷರವೂ - ಅಗ್ರಜ
Posted By ಅಂತರ್ವಾಣಿ at 11:02 pm 6 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು
ವಿಧ ವಿಧವಾದ ನಿರೀಕ್ಷೆಗಳೇತಕೆ?
ವಿಧಾತನು ಅದನ್ನು ವಿರೋಧಿಸಬಲ್ಲ
ನಿರೀಕ್ಷೆಗಳೇ ಬೇಸರದ ಮೂಲ ಅಗ್ರಜ
ಪರಿ ಪರಿಯ ನಿರೀಕ್ಷೆಗಳೇಕೆ ಮನದಲ್ಲಿ?
ಹರಿಯು ಅದನ್ನು ಹುಸಿಯಾಗಿಸಬಲ್ಲ
ನಿರೀಕ್ಷೆಗಳೇ ಬೇಸರದ ಮೂಲ ಅಗ್ರಜ
ನಿರೀಕ್ಷೆಗಳಿಗಿಡು ಪೂರ್ಣವಿರಾಮ
ಈಡೇರದಿರೆ ಅವು, ಚಿತ್ತ ನಿರ್ನಾಮ!
ನಿರೀಕ್ಷೆಗಳೇ ಬೇಸರದ ಮೂಲ ಅಗ್ರಜ
Posted By ಅಂತರ್ವಾಣಿ at 5:25 pm 13 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು
Posted By ಅಂತರ್ವಾಣಿ at 8:14 pm 2 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು