ಚಿಪ್ಪೊಳಗಿರಲು ನಾ ಮುತ್ತೇ?
ಗೂಡೊಳಗಿರಲು ನಾ ಜೇನೇ ?
ನಿನ್ನೊಳಗಿರಲು ನಾ ಯಾರೇ?
ಹೂವೊಳಗಿರಲು ನಾ ಕಂಪೇ?
ಹಣ್ಣೊಳಗಿರಲು ನಾ ರುಚಿಯೇ?
ಅದಿರೊಳಗಿರಲು ನಾ ಹೊನ್ನೇ?
ನಿನ್ನೊಳಗಿರಲು ನಾ ಯಾರೇ?
ಮುಗಿಲಲಿರಲು ನಾ ರವಿಯೇ?
ಜಯದೊಳಿರಲು ನಾ ನಗುವೇ?
ಭಂಡಾರದೊಳಿರಲು ನಾ ಸಿರಿಯೇ?
ನಿನ್ನೊಳಗಿರಲು ನಾ ಯಾರೇ?
.........ಇದು ಅಂತರಂಗದ ಅನುಭವ
Posted By ಅಂತರ್ವಾಣಿ at 5:43 pm 2 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಪ್ರಣಯವಾಣಿ (Romantic )
Posted By ಅಂತರ್ವಾಣಿ at 11:10 pm 1 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಇತರೆ, ಕವನಗಳು, ವಿಶೇಷ ಕವನಗಳು
Posted By ಅಂತರ್ವಾಣಿ at 10:46 pm 2 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಚಿತ್ರ ಕವನ, ವಿಶೇಷ ಕವನಗಳು
Posted By ಅಂತರ್ವಾಣಿ at 11:52 pm 5 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು
Posted By ಅಂತರ್ವಾಣಿ at 8:05 pm 1 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಪ್ರಣಯವಾಣಿ (Romantic )
ಎಚ್ಚರಿಸುವ ಬನ್ನಿ, ಮಲಗಿರುವ ಭಾಸ್ಕರನ
ಕಾರ್ಮೋಡಗಳ ಹೊದಿಕೆಯ ಪಕ್ಕಕೆ ಸರಿಸುತ
ಕೋಗಿಲೆಗಳ ಕಂಠದಿ ಸುಪ್ರಭಾತವ ಹಾಡಿಸುತ
ಎಚ್ಚರಿಸುವ ಬನ್ನಿ, ಮಲಗಿರುವ ಭಾಸ್ಕರನ
ಎಲೆಗಳ ಮೇಲಿನ ಹನಿಗಳ ಕಣ್ಣಿಗೆ ಎರಚುತ
ಅರಳಿದ ಹೂಗಳು ಕಂಪನು ಬೀರುತ
ಹಾರುವ ಹಕ್ಕಿಯ ಸಾಲಿನ ಮೆರವಣಿಗೆಯಿಂದ
ಎಚ್ಚರಿಸುವ ಬನ್ನಿ, ಮಲಗಿರುವ ಭಾಸ್ಕರನ
ಆಗಸದಿ ತುಂಬಿಹ ಇಬ್ಬನಿ ಹಾಸು
ಇರುಳೆಂಬ ಭ್ರಮೆಯ ನೀಡುತಿದೆ!
ಗಂಟೆ ಏಳಾದರೂ ನೀ ಏಳ ಬಾರದೆ?
ಇರುಳನ್ನು ನೂಕಿ, ಬೆಳಕ ನೀಡ ಬಾರದೆ?
[ನಮಗಿಂತ ಬೇಗ ಏಳ ಬೇಕಾದ ಸೂರ್ಯ, ಆಲಸ್ಯದಿಂದ ಮಲಗಿದರೆ, ಈ ರೀತಿ ಪ್ರಾರ್ಥನೆ ಮಾಡ ಬಹುದಲ್ವಾ? ]
ನನಗೆ ಈಗ ಅನ್ನಿಸ್ತಿದೆ
ದುಡ್ಡಿನ ಗಿಡ ಇರಬೇಕಿತ್ತು!
ನನಗೆ ಬಂದ ಸಮಸ್ಯೆಗೆ
ದುಡ್ಡೇ ಉತ್ತರ ಕೊಡಬೇಕಿತ್ತು
ಚಿಕ್ಕ ವಯಸ್ನಲ್ ಅಮ್ಮ ಹೇಳಿದ್ನ
ಹಾಸ್ಯ ಅಂತ ತಿಳ್ಕೊಂಡಿದ್ದೆ
ದುಡ್ಡೂ ಕೂಡ ಹಾಳೆಯಂತೆ! ಬೆಲ್ಲೆಯಂತೆ!
ಹೇಗೆ ಬೆಳೆಸೋದ್ ಅಂದ್ಕೊಂಡಿದ್ದೆ
ವಸುಂಧರೆ ತಾಯಿ ನೀನು
ಬೀಜ ಹಾಕಿದ್ರೆ ಮರ ಮಾಡ್ತಿ
ನಾಣ್ಯವೊಂದ ಬಿತ್ತುತ್ತೀನಿ
ದುಡ್ಡಿನ ಗಿಡ ಮಾಡ್ತೀಯಾ?
ಜೀವಕ್ ಬೇಕಾದ್ ಅನ್ನ, ನೀರು
ಎಲ್ಲಾ ನೀನೆ ಕೊಡ್ತೀಯಾ
ಜೀವನ ಸಾಗಿಸೋಕ್ ಬೇಕೀ ದುಡ್ಡು
ಇನ್ನೂ ಯಾಕೆ ಕೊಟ್ಟಿಲ್ಲ?
ನಾಣ್ಯಕ್ ಜೀವ ಕೊಟ್ಟು ನೋಡು
ಬಿತ್ತಿ ಪ್ರಯತ್ನ ಮಾಡ್ತೀನಿ!
ದುಡ್ಡಿನ ಗಿಡ ಬಂದ್ರೆ ಸಾಕು
ಬಡವರ ಸಮಸ್ಯೆ ಪರಿಹರಿಸ್ತೀನಿ.
ನನಗೆ ಈಗ ಅನ್ನಿಸ್ತಿದೆ
ದುಡ್ಡಿನ ಗಿಡ ಇರಬೇಕಿತ್ತು!
ನನಗೆ ಬಂದ ಸಮಸ್ಯೆಗೆ
ದುಡ್ಡೇ ಉತ್ತರ ಕೊಡಬೇಕಿತ್ತು.
Posted By ಅಂತರ್ವಾಣಿ at 8:58 pm 9 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು, ವಿಶೇಷ ಕವನಗಳು
ನಿನ್ನ ಮರೆತಿಹ ಚಣಗಳೆಲ್ಲಿದೆ
ನಿನ್ನ ನೆನೆಯದ ದಿನಗಳೆಲ್ಲಿದೆ
ನೀನು ನನ್ನೊಳಗಿರುವ ಸತ್ಯವ ನಾನು ಮರೆತಿಲ್ಲ
ನನ್ನ ಮೊಗದಲಿ ನಗುವ ತರಿಸುವೆ
ನನ್ನ ನಯನದಿ ಬಿಂದು ಸುರಿಸುವೆ
ನನ್ನ ಕಂಬನಿ ಒರೆಸುವ ನಿನ್ನ ಹೇಗೆ ಮರೆಯಲಿ ನಾ
[ಇದನ್ನು ಯಾರ ಕುರಿತಾಗಿ ಬರೆದಿದ್ದೇನೆಂದು ಬಿಡಿಸಿ ಹೇಳ ಬೇಕಿಲ್ಲ ಅನಿಸುತ್ತೆ. ಮತ್ತೊಂದು ಭಾಮಿನೀ ಷಟ್ಪದಿಯ ಪ್ರಯತ್ನ]
Posted By ಅಂತರ್ವಾಣಿ at 5:16 pm 10 ಜನ ಸ್ಪಂದಿಸಿರುವರು
ವಿಭಾಗ: ಕವನಗಳು
ನೆನೆಯುವೆ ಮಳೆಯಲಿ
ನಿನ್ನ ಜೊತೆಯಲಿ
ಅಂತರಂಗದ ಮಾತುಗಳ
ಮೌನ ಸಂಭಾಷಣೆಯಲಿ!
ಮಳೆಯಿಂದ ನೀ ನೆನೆದು
ಮೈದುಂಬಿ ಬರುವಾಗ
ತೆರೆದ ಕಂಗಳಲಿ ನಿಂದೆ
ನಿನ್ನ ಪಾದದಡಿಯಲಿ
ಮಂಜಿನೂರಿನಲ್ಲಿ ಜನನ
ಕೊರೆಯುವಂತ ದೇಹ ರಚನ!
ಮತ್ತೆ ನೋಡ ಬಯಸುವೆ
ಸೌಂದರ್ಯವತಿ ನಿನ್ನ!
--
ಈ ಸೌಂದರ್ಯವತಿ ಯಾರು ಅಂತ ನಿಮಗೆ ಗೊತ್ತಿದ್ದಲ್ಲಿ ತಿಳಿಸಿ. ಸರಿಯಾದ ಉತ್ತರಕ್ಕೆ ಬಹುಮಾನ ಖಚಿತ! ಒಂದು ಸುಳಿವು ಕೊಡುತ್ತೀನಿ. ಕೊನೆ ಚರಣದ ಮೊದಲೆರಡು ಸಾಲುಗಳನ್ನು ಹಲವು ಬಾರಿ ಓದಿದರೆ ಏನಾದರೂ ಹೊಳಿಯಬಹುದು.
Posted By ಅಂತರ್ವಾಣಿ at 11:52 pm 31 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ವಿಶೇಷ ಕವನಗಳು
ಅಂದು ಈ ರೀತಿ ಕೇಳಿದ್ದೆ,
"ಗುಬ್ಬಿ ಮರಿ ಎಲ್ಲಮ್ಮ?
ಕಣ್ಣಿಗೇಕೋ ಕಾಣದಮ್ಮ....
ಪೂರ್ತಿ ಕವನ ಇಲ್ಲಿದೆ.
ಆದರೆ ಇಂದು (ತಿಂಗಳ ಹಿಂದೆ) ಮತ್ತೆ ಗುಬ್ಬಿ ಮರಿಯನ್ನು ಬೆಂಗಳೂರಿನಲ್ಲಿ ಕಂಡೆ! ಆ ಕ್ಷಣಕ್ಕೆ ನನಗಾದ ಆನಂದವನ್ನು ಕವನದ ಮೂಲಕ ಹೇಳಬೇಕೆಂದು, ಆ ಕವನದ ಧಾಟಿಯಲ್ಲೇ ಈ ಕವನವನ್ನು ಬರೆದೆ.
ಗುಬ್ಬಿ ಮರಿ ಕಂಡೆನಮ್ಮ
ಕಣ್ಣಿಗಿಂದು ಹಬ್ಬವಮ್ಮ
ನನ್ನ ನೋಡ ಬೇಕೆಂದು
ಮತ್ತೆ ಹಾರಿ ಬಂತೇನಮ್ಮ?
ನನ್ನ ಊಟ ಸುಲಭವಮ್ಮ
ನಿನ್ನ ಓಟ ನಿಲ್ಲಿಸಮ್ಮ
ಮನೆಯ ಅಂಗಳದಿ ಬಂದ
ಗುಬ್ಬಿ ಮರಿ ತೋರಿಸಮ್ಮ
ಆಟಿಕೆ ಗುಬ್ಬಿ ಏಕಮ್ಮ?
ಹಾರುವ ಗುಬ್ಬಿ ಇದೆಯಮ್ಮ
ಮರದ ಪುಟ್ಟ ಗೂಡಿನಲ್ಲಿ
ಕೂತಿಹ ಗುಬ್ಬಿ ತೋರಿಸಮ್ಮ
Posted By ಅಂತರ್ವಾಣಿ at 11:07 pm 7 ಜನ ಸ್ಪಂದಿಸಿರುವರು
ಯಾವ ಚೆಲುವ ಬರುತ್ತಾನೋ
ಈ ಚೆಲುವೆಯ ನೋಡಲು?
ಯಾವ ಸುರನು ಬರುತ್ತಾನೋ
ಈ ದೇವತೆಯ ಪಡೆಯಲು?
ಎಲ್ಲೂ ಕಾಣದ ಮೂಗುತಿ ಸುಂದರಿ
ಇಲ್ಲೇ ಇಹಳು ಮೇನಕೆ ಸೋದರಿ!
ಕಣ್ಣ ಸನ್ನೆಯಲೆ ಮಾತು ಬೆಳೆಯಿತು
ತುಟಿಯು ಅದರುತ ಮುತ್ತ ಬಯಸಿತು!
ನಿನ್ನ ದನಿಯ ಕೇಳಲು
ಚಡಪಡಿಸಿತು ಅವನ ಕಿವಿ
ನಿನ್ನ ಕುರಿತು ಗೀಚುತ
ಅವನಾದನು ಕವಿ!
Posted By ಅಂತರ್ವಾಣಿ at 12:50 am 10 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಪ್ರಣಯವಾಣಿ (Romantic )
ಜ್ಞಾನದ ಶಾಯಿ ಲೇಖನಿಯೊಳಿರಲು
ಹೊಮ್ಮುವುದು ಲೇಖನವು
ಜ್ಞಾನದ ಶಾಯಿ ಬರಿದಾದ ಮೇಲೆ
ಹೊಮ್ಮದು ಒಂದಕ್ಷರವೂ - ಅಗ್ರಜ
Posted By ಅಂತರ್ವಾಣಿ at 11:02 pm 6 ಜನ ಸ್ಪಂದಿಸಿರುವರು
ವಿಭಾಗ: ಅಗ್ರಜಾನುಭವ, ಕವನಗಳು
--
ಹೂವಿನಂತೆ ಬಾಳು
ಬಾಡಿದ ಹೂ ಕಸದ ಪಾಲು
ಬಾಡದ ಹೂ ದೇವರ ಪಾಲು
ಚೆಲುವಿರಲಿ ನೋಟಕೆ
ಪರಿಮಳವಿರಲಿ ಆಕರ್ಷಣೆಗೆ
ಮುಳ್ಳಿರಲಿ ನಿನ್ನ ರಕ್ಷಣೆಗೆ
ಮಕರಂದವಿರಲಿ ಸದುದ್ದೇಶಕೆ
ಮುಡಿಯಲು ಬೇಕು ಹೂ
ಮಡಿದಾಗಲೂ ಬೇಕು ಹೂ
ಎಲ್ಲರ ಪಾಲಿಗು ಹೂವಾಗು
ಎಲ್ಲರ ಪಾಲಿಗು ಬೇಕಾಗು
Posted By ಅಂತರ್ವಾಣಿ at 8:00 am 11 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ವಿಶೇಷ ಕವನಗಳು
ಹಾರುವ ಹಕ್ಕಿಯ ಹಿಡಿಯಲು ಹೋದ ಪೆದ್ದ ನಾನು
ಬಾನಿನ ಚುಕ್ಕಿಯ ಎಣಿಸಲು ಹೋದ ಪೆದ್ದ ನಾನು
ಮೋಡದಿ ಮಹಲನು ಕಟ್ಟಲು ಹೋದ ಪೆದ್ದ ನಾನು
ಏರುವ ಅಲೆಗಳ ಅಳೆಯಲು ಹೋದ ಪೆದ್ದ ನಾನು
ಹೂವಿನ ಪರಿಮಳ ಮೂಸದೆ ಹೋದ ಪೆದ್ದ ನಾನು
ಬಣ್ಣದ ಚಿತ್ತಾರವ ಅಳಿಸಲು ಹೋದ ಪೆದ್ದ ನಾನು
ಬಿಟ್ಟ ಶರವ ಹಿಂದೆ ತರಲು ಹೋದ ಪೆದ್ದ ನಾನು
ಕೊಟ್ಟ ಜೇನನು ಸವಿಯದೇ ಹೋದ ಪೆದ್ದ ನಾನು
Posted By ಅಂತರ್ವಾಣಿ at 10:52 pm 9 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ವಿಶೇಷ ಕವನಗಳು
ಹಕ್ಕಿ ಹಾರ ಬಯಸಿದೆ ತನ್ನ ಗೂಡಿಗೆ
ಮುಂದೆ ಕೊಡ ಬೇಕಿಲ್ಲ ಇದಕೆ ಬಾಡಿಗೆ
ಹಕ್ಕಿಗಳದೊಂದು ಪುಟ್ಟ ಸಂಸಾರ
ಸಂಬಂಧಗಳು ಸೇರಿದಾಗದು ಸಾಗರ
ಮರವೊಂದ ಹುಡುಕಿತು ಗೂಡು ಕಟ್ಟಲು
ಉಳಿದ ಹಕ್ಕಿಗಳು ಬಂದು ಬೆನ್ನ ತಟ್ಟಲು
ಬಲವಿಲ್ಲದ ರೆಕ್ಕೆಗಳಿರೆ ಹಾರಲಸಾಧ್ಯ
ಬಲ ತುಂಬುವ ಹಕ್ಕಿಗಳಿರಲದು ಸಾಧ್ಯ
ಕಟ್ಟಾಯಿತು ಹಕ್ಕಿಗೊಂದು ಗೂಡು
ಎಷ್ಟು ಚೆಂದವಿದೆ ಅದು ನೀನೆ ನೋಡು
ಹಕ್ಕಿ ಹಾರ ಬಯಸಿದೆ ತನ್ನ ಗೂಡಿಗೆ
ಮುಂದೆ ಕೊಡ ಬೇಕಿಲ್ಲ ಇದಕೆ ಬಾಡಿಗೆ
Posted By ಅಂತರ್ವಾಣಿ at 9:47 pm 16 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ವಿಶೇಷ ಕವನಗಳು
ಹುಟ್ಟಿನಲ್ಲಿ ಸಂತಸ
ಸಾವಿನಲ್ಲಿ ಶೋಕ
ಹೋಯಿತೊಂದು ಜೀವ
ಬಿಟ್ಟು ಈ ಲೋಕ
ಹುಟ್ಟಿನಲ್ಲಿ ಆನಂದ
ಸಾವಿನಲ್ಲಿ ಕಂಬನಿ
ನನ್ನ ಪ್ರೀತಿಸಿದ ಜೀವ
ಬಿಟ್ಟು ಹೋಯಿತು ಧರಣಿ
ಹುಟ್ಟಿನಲ್ಲಿ ಸಂಭ್ರಮ
ಸಾವಿನಲ್ಲಿ ಸಂಕಟ
ನಾ ಪ್ರೀತಿಸಿದ ಜೀವಕೆ
ಮುಂದಿಲ್ಲ ಲೋಕದ ಜಂಜಾಟ
---
ಬದುಕಿದ್ದಿದ್ದರೆ ೭೯ ವರ್ಷವಾಗಿರೋದು..
ಈಗ ೩ ತಿಂಗಳಾಗಿದೆ..
Posted By ಅಂತರ್ವಾಣಿ at 12:41 pm 9 ಜನ ಸ್ಪಂದಿಸಿರುವರು
ವಿಭಾಗ: ಕವನಗಳು
ಆಕಸ್ಮಿಕದಿ ಸಿಕ್ಕ ಈ ಪೋರ
ಆ ದೇವರು ಕೊಟ್ಟ ವರ!
ಆಗಂತುಕನೆನೆಸಿದರೂ
ಆತ್ಮೀಯನಾದ ಚೋರ!
ಸ್ನೇಹಕ್ಕೊಪ್ಪಿಗೆ ನೀಡಿದೆ
ಸ್ನೇಹಕೂಪವ ನೋಡಿದೆ
ಮನವು ಮೆಚ್ಚಿದ ಮಿತ್ರನಿವನೆ
ಎಂದು ನಾನು ಹಿಗ್ಗಿದೆ!
ಅಭಿರುಚಿಯು ಒಂದಾಗಿದೆ
ಅಭಿಮಾನವು ಹೆಚ್ಚಾಗಿದೆ
ಜೀವನದಂತ್ಯದವರೆಗೂ
ಇವನ ಸ್ನೇಹ ಬೇಕಾಗಿದೆ!
ಅಣ್ಣನಾದ ನನಗೆ
ತಮ್ಮನಾದೆ ಅವನಿಗೆ
ವಂದಿಸುವೆ ಆ ವಿಧಿಗೆ
ವಂದಿಸುವೆ ಈ ನಿಧಿಗೆ!
Posted By ಅಂತರ್ವಾಣಿ at 9:06 pm 17 ಜನ ಸ್ಪಂದಿಸಿರುವರು
ವಿಭಾಗ: ಕವನಗಳು
ಅಲ್ಲಿ ನೋಡಲೋ? ಇಲ್ಲಿ ನೋಡಲೋ?
ಚಂದಿರನಲ್ಲಿ, ಚಂದ್ರಮುಖಿಯಿಲ್ಲಿ!
ಭಾವನೆ ತಕ್ಕಡಿಯಲಿ ತೂಗಲು
ಯಾವುದೂ ಹೆಚ್ಚಿಲ್ಲ, ಕಡಿಮೆಯಿಲ್ಲ!
ಅಲ್ಲಿ ನೋಡಲೋ? ಇಲ್ಲಿ ನೋಡಲೋ?
ಜಲಪಾತವಲ್ಲಿ, ಕಪ್ಪು ಝರಿಯಿಲ್ಲಿ!
ಕಣ್ಣ ತಕ್ಕಡಿಯಲಿ ತೂಗಲು
ಯಾವುದೂ ಹೆಚ್ಚಿಲ್ಲ, ಕಡಿಮೆಯಿಲ್ಲ!
ಅದ ಸವಿಯಲೋ? ಇದ ಸವಿಯಲೋ?
ಜೇನು ಅಲ್ಲಿ, ಗುಲಾಬಿ ತುಟಿಯಿಲ್ಲಿ
ತುಟಿಯ ತಕ್ಕಡಿಯಲಿ ತೂಗಲು
ಯಾವುದೂ ಹೆಚ್ಚಿಲ್ಲ, ಕಡಿಮೆಯಿಲ್ಲ!
ಅಲ್ಲಿ ಕೇಳಲೋ? ಇಲ್ಲಿ ಕೇಳಲೋ?
ಕೋಗಿಲೆಯು ಅಲ್ಲಿ, ಇಂಪಾದ ದನಿಯಿಲ್ಲಿ
ಕಿವಿಯ ತಕ್ಕಡಿಯಲಿ ತೂಗಲು
ಯಾವುದೂ ಹೆಚ್ಚಿಲ್ಲ, ಕಡಿಮೆಯಿಲ್ಲ
ಅದ ಬಯಸಲೋ? ಇದ ಬಯಸಲೋ?
ಗೊಂದಲ ನನ್ನದು
ಅದನ್ನು ಬಯಸುತಾ, ಇದನ್ನೂ ಬಯಸುವ
ಹಂಬಲ ನನ್ನದು
Posted By ಅಂತರ್ವಾಣಿ at 10:37 pm 12 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಪ್ರಣಯವಾಣಿ (Romantic )
ಗುಬ್ಬಿ ಮರಿ ಎಲ್ಲಮ್ಮ?
ಕಣ್ಣಿಗೇಕೋ ಕಾಣದಮ್ಮ
ನನ್ನ ಸಂಗ ಬೇಡವೆಂದು
ತೊರೆದು ಹೋಯಿತೇನಮ್ಮ?
ಕಾಗೆಗೆ ಗೆಳೆಯನಿಲ್ಲಮ್ಮ
ಕಾಳನು ತಿನ್ನುವರಿಲ್ಲಮ್ಮ
ಏಕೆ ಹೀಗಾಯಿತೆಂದು
ಒಮ್ಮೆ ನನಗೆ ಹೇಳಮ್ಮ
ಆಟಿಕೆ ಗುಬ್ಬಿ ಬೇಡಮ್ಮ
ಹಾರುವ ಗುಬ್ಬಿ ತೋರಿಸಮ್ಮ
ಮರದ ಪುಟ್ಟ ಗೂಡಿನಲ್ಲಿ
ಕೂರುವ ಗುಬ್ಬಿ ಬೇಕಮ್ಮ
Posted By ಅಂತರ್ವಾಣಿ at 11:00 pm 12 ಜನ ಸ್ಪಂದಿಸಿರುವರು
ಬಾಳ ದೋಣಿಯ ಅಂಬಿಗ ಶ್ರೀ ಹರೀಶ್, ಭಾಮಿನಿ ಷಟ್ಪದಿಯಲ್ಲೊಂದು ಕವನ ರಚಿಸುವಂತೆ ಹುಳ ಬಿಟ್ಟು, ಭಾಮಿನಿಯ ಕುರಿತು ಮಾಹಿತಿ ಕೊಟ್ಟು, ಈ ಕೆಲಸಕ್ಕೆ ಕೈ ಹಾಕುವಂತೆ ಮಾಡಿದ್ದಕ್ಕೆ ವಂದನೆಗಳನ್ನು ಹೇಳುತ್ತೇನೆ.
ಸದ್ಯದ ನನ್ನ ಪರಿಸ್ಥಿತಿಯನ್ನು ಭಾಮಿನಿಯಲ್ಲೇ ಹೇಳುತ್ತಾಯಿದ್ದೀನಿ.
ಮನದಿ ಭಾಮಿನಿಯ ಆಸೆಯಿಟ್ಟ
ಬಾನ ನೋಡುತ ಯೋಚಿಸಿದೆ ನಾ
ಜೇನಿನ ನುಡಿಗಳು ಸಿಗುವ ಕಾಯಕ ನಡೆದಿದೆ ಈಗ
ಕಾನನದಿ, ಪರಿಸರದಿ ಹುಡುಕಿಹೆ
ಅನವರತ ಮನಸನ್ನು ಕೆದಕಿಹೆ
ನನಗೆ ತಿಳಿಯದ ಶಕ್ತಿ ಬರೆಸಿಹ ಮೊದಲ ಕವನವಿದು
Posted By ಅಂತರ್ವಾಣಿ at 11:33 pm 16 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ವಿಶೇಷ ಕವನಗಳು